ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತಕ್ಕೆ (ಎಂಸಿಡಿಸಿಸಿ) ಬೆಂಗಳೂರಿನ ಅಪೆಕ್ಸ್ ಬ್ಯಾಂಕ್ ನಿಂದ ‘ಬಿ ವಿಭಾಗ’ದಲ್ಲಿ ‘ಉತ್ತಮ ಕಾರ್ಯನಿರ್ವಹಣೆ’ ನೀಡಿದ ಬ್ಯಾಂಕ್ ಎಂಬ ಪ್ರಶಸ್ತಿ ದೊರೆತಿದೆ. ಈ ಹಿನ್ನೆಲೆಯಲ್ಲಿ ಇಂದು ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರೂ, ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತದ ಉಪಾಧ್ಯಕ್ಷರು ಆದ ಜಿ.ಡಿ.ಹರೀಶ್ ಗೌಡ ಹಾಗೂ ಎಂಸಿಡಿಸಿಸಿ ಬ್ಯಾಂಕ್ ನ ವ್ಯವಸ್ಥಾಪಕ ನಿರ್ದೇಶಕರಾದ ಜೆ.ಸಿ.ಜನಾರ್ಧನ್ ಅವರು ಪ್ರಶಸ್ತಿ ಸ್ವೀಕರಿಸಿ ಗೌರವಕ್ಕೆ ಪಾತ್ರರಾದರು.ಬೆಂಗಳೂರಿನ ಅಪೆಕ್ಸ್ […]
ನಮ್ಮ ಬ್ಯಾಂಕಿನ ವತಿಯಿಂದ ಇಂದು ಮೈಸೂರು ವಿಶ್ವವಿದ್ಯಾಲಯದ ಆವರಣದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಹಮ್ಮಿಕೊಂಡಿದ್ದ ‘ರೈತ ಸ್ಪಂದನ’ ಕಾರ್ಯಕ್ರಮವನ್ನು ಮಾನ್ಯ ಉಸ್ತುವಾರಿ ಸಚಿವ ಹಾಗೂ ಸಹಕಾರ ಸಚಿವರಾದ ಶ್ರೀ ಎಸ್. ಟಿ. ಸೋಮಶೇಖರ್ ಅವರು ಬ್ಯಾಂಕ್ ನ ಅಧ್ಯಕ್ಷರಾದ ಶ್ರೀ ಜಿ.ಡಿ ಹರೀಶ್ ಗೌಡ ಹಾಗೂ ಮೈಮುಲ್ ಅಧ್ಯಕ್ಷರಾದ ಪ್ರಸನ್ನ ಅವರ ಜೊತೆಗೂಡಿ ಉದ್ಘಾಟಿಸಿದರು.