ಕೆ.ಸಿ.ಸಿ, ಮಧ್ಯಮಾವಧಿ ಕೃಷಿ ಸಾಲಗಳು ಹಾಗೂ ಸ್ವ ಸಹಾಯ ಗುಂಪುಗಳ ಸಾಲದ ಮರುಪಾವತಿ ಅವಧಿಯನ್ನು ಕನಿಷ್ಟ 3 ತಿಂಗಳ ವರೆಗೆ ವಿಸ್ತರಿಸಲು ಮನವಿ

ಇಂದು ಮೈಸೂರಿನ ಜಿಲ್ಲಾ ಪಂಚಾಯತ್ ನ ಸಭಾಂಗಣದಲ್ಲಿ ಎಂಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಜಿ. ಡಿ ಹರೀಶ್ ಗೌಡ ಅವರು ಮಾನ್ಯ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್. ಟಿ. ಸೋಮಶೇಖರ್ ಅವರನ್ನು ಭೇಟಿ ಮಾಡಿದರು. ಬ್ಯಾಂಕಿನಿಂದ 2020-21 ನೇ ಸಾಲಿನಲ್ಲಿ 80,368 ಜನ ರೈತರಿಗೆ ರೂ.74916.36 ಲಕ್ಷಗಳ ಕೆ.ಸಿ.ಸಿ. ಸಾಲ, 1129 ಜನ ರೈತರಿಗೆ ರೂ.2810.20 ಲಕ್ಷಗಳ ಮಧ್ಯಮಾವದಿ ಸಾಲ ಹಾಗೂ ಸ್ವ-ಸಹಾಯ ಗುಂಪುಗಳಿಗೆ [...]

ಕಾಯಕ ಯೋಜನೆ ಅಡಿಯಲ್ಲಿ ಲಿಂಕೇಜ್ ಸಾಲ ವಿತರಣೆ

ಜನತಾ ನಗರ ಶಾಖೆಯಿಂದ ಕಾಯಕ ಯೋಜನೆ ಅಡಿಯಲ್ಲಿ ಜನತಾನಗರ ಹಾಗೂ ದಟ್ಟಗಳ್ಳಿಯ ಸಿರಿ, ದೃಷ್ಟಿ ಮಹಿಳಾ ಸ್ವಸಹಾಯ ಸಂಘಕ್ಕೆ ತಲಾ 10 ಲಕ್ಷ ರೂ ಸಾಲ ವಿತರಣೆ ಹಾಗೂ ಚಾಮುಂಡೇಶ್ವರಿ ಧನಲಕ್ಷ್ಮಿ ಶ್ರೀ ಬಾಲಗಂಗಾಧರ ನಾಥಸ್ವಾಮಿ ಮಹಿಳಾ ಸ್ವಸಹಾಯಕ್ಕೆ ಒಟ್ಟು 7 ಲಕ್ಷ ರೂ ಲಿಂಕೇಜ್ ಸಾಲ ವಿತರಣೆಯನ್ನು ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಶ್ರೀ ಜಿ.ಡಿ.ಹರೀಶ್ ಗೌಡ ರಿಂದ ಚೆಕ್ ವಿತರಿಸಲಾಯಿತು.ಈ ವೇಳೆ ಬ್ಯಾಂಕಿನ ನಿರ್ದೇಶಕರಾದ ಎಂ ಪಿ ಸುನಿಲ್, ಮುಖ್ಯ [...]

ಬಡವರ ಬಂಧು ಯೋಜನೆ ಅಡಿಯಲ್ಲಿ ಸಾಲ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ

ಇಂದು ಬ್ಯಾಂಕ್ ನ ಪ್ರಧಾನ ಕಛೇರಿಯಲ್ಲಿ ಬೀದಿ ಬದಿ ವ್ಯಾಪಾರಸ್ಥರಿಗೆ "ಬಡವರ ಬಂಧು" ಯೋಜನೆ ಅಡಿಯಲ್ಲಿ ಸಾಲ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಫಲಾನುಭವಿಗಳಿಗೆ ಚೆಕ್ ಅನ್ನು ಅಧ್ಯಕ್ಷರಾದ ಶ್ರೀ ಜಿಡಿ ಹರೀಶ್ ರವರು ವಿತರಿಸಿದರು.ಈ ವೇಳೆ ಬ್ಯಾಂಕಿನ ವ್ಯವಸ್ಥಾಪಕರಾದ ಶಶಿಧರ್, ಸಾಲ ವಿಭಾಗದ ಮುಖ್ಯಸ್ಥರಾದ ರವಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಗಣರಾಜ್ಯೋತ್ಸವ ದಿನದ ಧ್ವಜಾರೋಹಣ

ಇಂದು 'ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ'ದ ಪ್ರಧಾನ ಕಚೇರಿಯಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಎಂಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾದ ಶ್ರೀ ಜಿ.ಡಿ. ಹರೀಶ್ ರವರು ಧ್ವಜಾರೋಹಣ ಮಾಡಿದರು.ಈ ಸಂದರ್ಭದಲ್ಲಿ ಎಂಸಿಡಿಸಿಸಿ ಬ್ಯಾಂಕ್ ನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. 

ಪ್ರಗತಿ ಪರಿಶೀಲನಾ ಸಭೆ

'ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ'ದ ಪ್ರಧಾನ ಕಚೇರಿಯಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಹಕಾರ ಸಚಿವರಾದ ಶ್ರೀ ಎಸ್. ಟಿ. ಸೋಮಶೇಖರ್ ರವರು ಬ್ಯಾಂಕ್ ನ “ಪ್ರಗತಿ ಪರಿಶೀಲನಾ ಸಭೆ” ನಡೆಸಿದರು. ಈ ಸಂದರ್ಭದಲ್ಲಿ ಎಂಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ನ ಉಪಾಧ್ಯಕ್ಷರಾದ ಶ್ರೀ ಜಿ. ಡಿ. ಹರೀಶ್ ರವರು, ಉಪಾಧ್ಯಕ್ಷರಾದ ಶ್ರೀ ಬಿ. ಸದಾನಂದ [...]

ಕೆಂಪನಪುರ ಚಾಮರಾಜನಗರ ತಾಲೂಕು ಮತ್ತು ಜಿಲ್ಲಾ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ

ಚಾಮರಾಜನಗರ ಜಿಲ್ಲೆಯ ಕೆಂಪನಪುರ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ "ಕೆಂಪನಪುರ ಚಾಮರಾಜನಗರ ತಾಲೂಕು ಮತ್ತು ಜಿಲ್ಲಾ ಸಂಘ"ದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ನಡೆಯಿತು.ಈ ಸಂದರ್ಭದಲ್ಲಿ ಎಂಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ನ ಉಪಾಧ್ಯಕ್ಷರಾದ ಜಿ. ಡಿ. ಹರೀಶ್ ರವರು, ಎಂಸಿಡಿಸಿಸಿ ಬ್ಯಾಂಕ್ ನ ಉಪಾಧ್ಯಕ್ಷರಾದ ಶ್ರೀ ಬಿ. ಎನ್. ಸದಾನಂದ ರವರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಶ್ರೀ ಜಿ. [...]

ಜಿಲ್ಲಾ ಮಟ್ಟದ ತಾಂತ್ರಿಕ ಸಲಹಾ ಸಮಿತಿ ಸಭೆ

ಇಂದು ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲಾಮಟ್ಟದ ತಾಂತ್ರಿಕ ಸಲಹಾ ಸಮಿತಿ ಸಭೆಯನ್ನು ಜಿಲ್ಲಾಧಿಕಾರಿಗಳಾದ ಶ್ರೀಮತಿ ರೋಹಿಣಿ ಸಿಂಧೂರಿ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಈ ವೇಳೆ ಬ್ಯಾಂಕ್ ನ ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.  

ಬ್ಯಾಂಕ್ ನೌಕರರ ಸಾಂಸ್ಕೃತಿಕ ಸಂಘದ ವತಿಯಿಂದ ಸನ್ಮಾನ

ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ನ ಕೇಂದ್ರ ಕಚೇರಿಯಲ್ಲಿ ಇಂದು ಬ್ಯಾಂಕ್ ನೌಕರರ ಸಾಂಸ್ಕೃತಿಕ ಸಂಘದ ವತಿಯಿಂದ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಶ್ರೀ ಬೆಳ್ಳಿ ಪ್ರಕಾಶ್ ರವರು, ಉಪಾಧ್ಯಕ್ಷರಾದ ಶ್ರೀ ಜಿ. ಡಿ. ಹರೀಶ್ ರವರು ಹಾಗೂ ಮಾಜಿ ಉಪಾಧ್ಯಕ್ಷರಾದ ಶ್ರೀ ಟಿ. ಎಂ. ಚಂದ್ರಶೇಖರ್ ರವರಿಗೆ ಸನ್ಮಾನಿಸಿದ ಕ್ಷಣ.

ಟಿ. ನರಸೀಪುರ ಶಾಖೆಗೆ ಮಾನ್ಯ ಸಹಕಾರ ಸಚಿವರ ಭೇಟಿ

ಇಂದು ಟಿ. ನರಸೀಪುರ ಶಾಖೆಗೆ ಮಾನ್ಯ ಸಹಕಾರ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್. ಟಿ ಸೋಮಶೇಖರ್ ರವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬ್ಯಾಂಕ್ ನ ಅಧ್ಯಕ್ಷರಾದ ಶ್ರೀ ಜಿ. ಡಿ ಹರೀಶ್ ರವರು, ಉಪಾಧ್ಯಕ್ಷರಾದ ಶ್ರೀ ಬಿ. ಎನ್ ಸದಾನಂದ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಜಿ. ಸಿ ಜನಾರ್ದನ್, ಪ್ರಧಾನ ವ್ಯವಸ್ಥಾಪಕರಾದ ಶ್ರೀ ಶಶಿ ರವರು ಹಾಗೂ ಶಾಖೆಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಕೆ.ಸಿ.ಸಿ. ಬೆಳೆ ಸಾಲ ವಿತರಣೆ ಕಾರ್ಯಕ್ರಮ

'ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ ಹಾಗೂ 'ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ' ಇದರ ಸಹಯೋಗದೊಂದಿಗೆ ಕೊಳ್ಳೆಗಾಲ ಶಾಖೆ ವತಿಯಿಂದ ಹಮ್ಮಿಕೊಂಡಿದ್ದ ಸಂಘದ ನೂತನ ಸದಸ್ಯರಿಗೆ 'ಕೆ.ಸಿ.ಸಿ. ಬೆಳೆ ಸಾಲ ವಿತರಣೆ ಕಾರ್ಯಕ್ರಮ'ಕ್ಕೆ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ನ ಉಪಾಧ್ಯಕ್ಷರಾದ ಸನ್ಮಾನ್ಯ ಶ್ರೀ ಜಿ.ಡಿ. ಹರೀಶ್ ರವರು ಚಾಲನೆ ನೀಡಿದರು. ಈ ವೇಳೆ ಅರ್ಹ [...]