ಚಾಮರಾಜನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತಕ್ಕೆ ಭೇಟಿ

ಇಂದು ಚಾಮರಾಜನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತಕ್ಕೆ ಭೇಟಿ ನೀಡಿ ಒಕ್ಕೂಟದ ಬ್ಯಾಂಕ್ ಖಾತೆಗಳಿಗಾಗಿ ಎಂಸಿಡಿಸಿಸಿ ಬ್ಯಾಂಕ್ ನೊಂದಿಗೆ ಪಾಲುದಾರಿಕೆ ಮಾಡಿಕೊಳ್ಳುವ ಕುರಿತು ಎಂಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾದ ಶ್ರೀ ಜಿ.ಡಿ.ಹರೀಶ್ ಗೌಡ ಅವರು ಒಕ್ಕೂಟದ ಅಧ್ಯಕ್ಷರೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಎಂಸಿಡಿಸಿಸಿ ಬ್ಯಾಂಕ್ ನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಜಿ.ಸಿ.ಜನಾರ್ಧನ್, ಪ್ರಧಾನ ವ್ಯವಸ್ಥಾಪಕರಾದ ಶ್ರೀ ಶಶಿಧರ್, ಚಾಮರಾಜನಗರ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಅಧ್ಯಕ್ಷರಾದ [...]

ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿಯ ಬ್ಯಾಂಕ್ ಶಾಖೆಗೆ ಭೇಟಿ

ಇಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದ ಅಧ್ಯಕ್ಷರಾದ ಶ್ರೀ ಜಿ.ಡಿ.ಹರೀಶ್ ಗೌಡ ಅವರು “ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿಯ ಎಂಸಿಡಿಸಿಸಿ ಬ್ಯಾಂಕ್ ಶಾಖೆ”ಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಎಂಸಿಡಿಸಿಸಿ ಬ್ಯಾಂಕ್ ನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಜಿ.ಸಿ.ಜನಾರ್ಧನ್, ಪ್ರಧಾ‌ನ ವ್ಯವಸ್ಥಾಪಕರಾದ ಶ್ರೀ ಶಶಿಧರ್, ಸತೀಶ್, ರವಿ ಹಾಗೂ ಬ್ಯಾಂಕ್ ನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಗಣರಾಜ್ಯೋತ್ಸವ ದಿನದ ಧ್ವಜಾರೋಹಣ

ಇಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ. (ಎಂಸಿಡಿಸಿಸಿ) ದಲ್ಲಿ 73ನೇ "ಗಣರಾಜ್ಯೋತ್ಸವ ದಿನ"ವನ್ನು ಆಚರಿಸಲಾಯಿತು. ಬ್ಯಾಂಕ್ ನ ಅಧ್ಯಕ್ಷರಾದ ಶ್ರೀ ಜಿ.ಡಿ.ಹರೀಶ್ ಗೌಡ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಎಂಸಿಡಿಸಿಸಿ ಬ್ಯಾಂಕ್ ನ ನಿರ್ದೇಶಕರಾದ ಶ್ರೀ ಮಂಜೇಗೌಡ, ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಜಿ.ಸಿ.ಜನಾರ್ಧನ್, ಪ್ರಧಾನ ವ್ಯವಸ್ಥಾಪಕರಾದ ಶ್ರೀ ಶಶಿಧರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.