“ಆರ್ಥಿಕ ಸ್ಪಂದನ” ಕಾರ್ಯಕ್ರಮ

ಮೈಸೂರು ಕಲಾಮಂದಿರದಲ್ಲಿ ಇಂದು ಕರ್ನಾಟಕ ಸರಕಾರ ಹಾಗೂ ಸಹಕಾರ ಇಲಾಖೆಯ ಸಹಯೋಗದೊಂದಿಗೆ Covid-19ರ ಸಂಕಷ್ಟದ ಸಮಯದಲ್ಲಿ “ಆರ್ಥಿಕ ಸ್ಪಂದನ” ಕಾರ್ಯಕ್ರಮವನ್ನುಸಹಕಾರ ಸಚಿವರು, ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್.ಟಿ ಸೋಮಶೇಖರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸಹಕಾರ ಕ್ಷೇತ್ರದ ವಿವಿಧ ಯೋಜನೆಗಳಡಿಯಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಇದರ ವ್ಯಾಪ್ತಿಗೆ ಬರುವ 8 ಜಿಲ್ಲೆಗಳ ರೈತರು,ಉದ್ದಿಮೆದಾರರು ಹಾಗೂ ಹಲವು ವಿಭಾಗಗಳಲ್ಲಿ ಸಾಲ ನೀಡಲಾಗುತ್ತಿದ್ದು ಇದಕ್ಕೋಸ್ಕರ 8600ಕೋಟಿ ರೂಪಾಯಿಯನ್ನು ನಿಗದಿಪಡಿಸಲಾಗಿದೆ.

ಈ ವೇಳೆ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಲ್.ನಾಗೇಂದ್ರ ರವರು, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎ ರಾಮ್ ದಾಸ್ ರವರು, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ.ದೇವೇಗೌಡ ರವರು, ಸಹಕಾರ ಇಲಾಖೆಯ ಗಣ್ಯರು ಸೇರಿದಂತೆ ಸಹಕಾರ ಇಲಾಖೆಯ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.