ಇಂದು ಎಂ.ಸಿ.ಡಿ.ಸಿ.ಸಿ ಬ್ಯಾಂಕ್ ನ ಪ್ರಧಾನ ಕಚೇರಿಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಜಿ ಡಿ ಹರೀಶ್ ಗೌಡ್ರು ಧ್ವಜಾರೋಹಣ ಮಾಡುವ ಮುಖಾಂತರ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಜಿ ಸಿ ಜನಾರ್ಧನ್, ಮಂಜು ಗೌಡ್ರು ಹಾಗೂ ಅಧಿಕಾರಿವರ್ಗದವರು-ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದ ಹೆಬ್ಬಾಳ ಶಾಖೆಯ ವತಿಯಿಂದ 6 ಲಕ್ಷ ರೂಪಾಯಿಗಳ ವಾಹನ ಸಾಲದಲ್ಲಿ ನೀಡಲಾದ ಕ್ಯಾಂಟರ್ ವಾಹನದ ಕೀ ಅನ್ನು ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಜಿ.ಡಿ. ಹರೀಶ್ ಗೌಡ ಅವರು ಫಲಾನುಭವಿಗಳಿಗೆ ಹಸ್ತಾಂತರಿಸಿದರು.
ಇಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ 'ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್' ಹಾಗೂ 'ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ'ಗಳ ಸಹಯೋಗದೊಂದಿಗೆ ನಮ್ಮ ಬ್ಯಾಂಕಿನ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಜಿ.ಡಿ. ಹರೀಶ್ ಗೌಡ ಅವರು ರೈತರಿಗೆ ಸಾಲ ಹಾಗೂ ಟ್ರ್ಯಾಕ್ಟರ್ ವಿತರಿಸಿದರು. ಈ ವೇಳೆ ಬ್ಯಾಂಕಿನ ಉಪಾಧ್ಯಕ್ಷರಾದ ಬಿ. ಎನ್. ಸದಾನಂದ, ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.
ಇಂದು ನಮ್ಮ ಪ್ರಧಾನ ಕಚೇರಿಗೆ ಕಡೂರು ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಬೆಳ್ಳಿ ಪ್ರಕಾಶ್ ರವರು ಭೇಟಿ ನೀಡಿದ ಸಂದರ್ಭ.
ನಮ್ಮ ಬ್ಯಾಂಕಿನ ವತಿಯಿಂದ ಇಂದು ಮೈಸೂರು ವಿಶ್ವವಿದ್ಯಾಲಯದ ಆವರಣದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಹಮ್ಮಿಕೊಂಡಿದ್ದ ‘ರೈತ ಸ್ಪಂದನ’ ಕಾರ್ಯಕ್ರಮವನ್ನು ಮಾನ್ಯ ಉಸ್ತುವಾರಿ ಸಚಿವ ಹಾಗೂ ಸಹಕಾರ ಸಚಿವರಾದ ಶ್ರೀ ಎಸ್. ಟಿ. ಸೋಮಶೇಖರ್ ಅವರು ಬ್ಯಾಂಕ್ ನ ಅಧ್ಯಕ್ಷರಾದ ಶ್ರೀ ಜಿ.ಡಿ ಹರೀಶ್ ಗೌಡ ಹಾಗೂ ಮೈಮುಲ್ ಅಧ್ಯಕ್ಷರಾದ ಪ್ರಸನ್ನ ಅವರ ಜೊತೆಗೂಡಿ ಉದ್ಘಾಟಿಸಿದರು.
'ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ' ದ ನೂತನ ಶಾಖೆಯನ್ನು ಇಂದು ಹೆಬ್ಬಾಳ್ ದಲ್ಲಿ ಆರಂಭಿಸಲಾಗಿದ್ದು, ಈ ನೂತನ ಶಾಖಾ ಕಟ್ಟಡವನ್ನು ಮಾನ್ಯ ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಎಸ್. ಟಿ. ಸೋಮಶೇಖರ್ ಅವರ ನೇತೃತ್ವದಲ್ಲಿ ಉದ್ಘಾಟಿಸಲಾಯಿತು.ಈ ಸಂದರ್ಭದಲ್ಲಿ ಬ್ಯಾಂಕ್ ನ ಅಧ್ಯಕ್ಷರಾದ ಶ್ರೀ ಜಿ. ಡಿ. ಹರೀಶ್ ಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಜನಾರ್ಧನ್, ನಿರ್ದೇಶಕರುಗಳು ಹಾಗೂ ಬ್ಯಾಂಕಿನ ಸಿಬ್ಬಂದಿ [...]
ಇಂದು ಮೈಸೂರಿನ ಜಿಲ್ಲಾ ಪಂಚಾಯತ್ ನ ಸಭಾಂಗಣದಲ್ಲಿ ಎಂಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಜಿ. ಡಿ ಹರೀಶ್ ಗೌಡ ಅವರು ಮಾನ್ಯ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್. ಟಿ. ಸೋಮಶೇಖರ್ ಅವರನ್ನು ಭೇಟಿ ಮಾಡಿದರು. ಬ್ಯಾಂಕಿನಿಂದ 2020-21 ನೇ ಸಾಲಿನಲ್ಲಿ 80,368 ಜನ ರೈತರಿಗೆ ರೂ.74916.36 ಲಕ್ಷಗಳ ಕೆ.ಸಿ.ಸಿ. ಸಾಲ, 1129 ಜನ ರೈತರಿಗೆ ರೂ.2810.20 ಲಕ್ಷಗಳ ಮಧ್ಯಮಾವದಿ ಸಾಲ ಹಾಗೂ ಸ್ವ-ಸಹಾಯ ಗುಂಪುಗಳಿಗೆ [...]
ಜನತಾ ನಗರ ಶಾಖೆಯಿಂದ ಕಾಯಕ ಯೋಜನೆ ಅಡಿಯಲ್ಲಿ ಜನತಾನಗರ ಹಾಗೂ ದಟ್ಟಗಳ್ಳಿಯ ಸಿರಿ, ದೃಷ್ಟಿ ಮಹಿಳಾ ಸ್ವಸಹಾಯ ಸಂಘಕ್ಕೆ ತಲಾ 10 ಲಕ್ಷ ರೂ ಸಾಲ ವಿತರಣೆ ಹಾಗೂ ಚಾಮುಂಡೇಶ್ವರಿ ಧನಲಕ್ಷ್ಮಿ ಶ್ರೀ ಬಾಲಗಂಗಾಧರ ನಾಥಸ್ವಾಮಿ ಮಹಿಳಾ ಸ್ವಸಹಾಯಕ್ಕೆ ಒಟ್ಟು 7 ಲಕ್ಷ ರೂ ಲಿಂಕೇಜ್ ಸಾಲ ವಿತರಣೆಯನ್ನು ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಶ್ರೀ ಜಿ.ಡಿ.ಹರೀಶ್ ಗೌಡ ರಿಂದ ಚೆಕ್ ವಿತರಿಸಲಾಯಿತು.ಈ ವೇಳೆ ಬ್ಯಾಂಕಿನ ನಿರ್ದೇಶಕರಾದ ಎಂ ಪಿ ಸುನಿಲ್, ಮುಖ್ಯ [...]
ಇಂದು ಬ್ಯಾಂಕ್ ನ ಪ್ರಧಾನ ಕಛೇರಿಯಲ್ಲಿ ಬೀದಿ ಬದಿ ವ್ಯಾಪಾರಸ್ಥರಿಗೆ "ಬಡವರ ಬಂಧು" ಯೋಜನೆ ಅಡಿಯಲ್ಲಿ ಸಾಲ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಫಲಾನುಭವಿಗಳಿಗೆ ಚೆಕ್ ಅನ್ನು ಅಧ್ಯಕ್ಷರಾದ ಶ್ರೀ ಜಿಡಿ ಹರೀಶ್ ರವರು ವಿತರಿಸಿದರು.ಈ ವೇಳೆ ಬ್ಯಾಂಕಿನ ವ್ಯವಸ್ಥಾಪಕರಾದ ಶಶಿಧರ್, ಸಾಲ ವಿಭಾಗದ ಮುಖ್ಯಸ್ಥರಾದ ರವಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಇಂದು 'ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ'ದ ಪ್ರಧಾನ ಕಚೇರಿಯಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಎಂಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾದ ಶ್ರೀ ಜಿ.ಡಿ. ಹರೀಶ್ ರವರು ಧ್ವಜಾರೋಹಣ ಮಾಡಿದರು.ಈ ಸಂದರ್ಭದಲ್ಲಿ ಎಂಸಿಡಿಸಿಸಿ ಬ್ಯಾಂಕ್ ನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.