ಇಂದು ಚಾಮರಾಜನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತಕ್ಕೆ ಭೇಟಿ ನೀಡಿ ಒಕ್ಕೂಟದ ಬ್ಯಾಂಕ್ ಖಾತೆಗಳಿಗಾಗಿ ಎಂಸಿಡಿಸಿಸಿ ಬ್ಯಾಂಕ್ ನೊಂದಿಗೆ ಪಾಲುದಾರಿಕೆ ಮಾಡಿಕೊಳ್ಳುವ ಕುರಿತು ಎಂಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾದ ಶ್ರೀ ಜಿ.ಡಿ.ಹರೀಶ್ ಗೌಡ ಅವರು ಒಕ್ಕೂಟದ ಅಧ್ಯಕ್ಷರೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಎಂಸಿಡಿಸಿಸಿ ಬ್ಯಾಂಕ್ ನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಜಿ.ಸಿ.ಜನಾರ್ಧನ್, ಪ್ರಧಾನ ವ್ಯವಸ್ಥಾಪಕರಾದ ಶ್ರೀ ಶಶಿಧರ್, ಚಾಮರಾಜನಗರ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಅಧ್ಯಕ್ಷರಾದ ಶ್ರೀ ಹೆಚ್.ಎಸ್.ನಂಜುಂಡ ಪ್ರಸಾದ್, ಸತೀಶ್, ರವಿ ಹಾಗೂ ಒಕ್ಕೂಟದ ನಿರ್ದೇಶಕರು ಉಪಸ್ಥಿತರಿದ್ದರು.