ಚಾಮರಾಜನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತಕ್ಕೆ ಭೇಟಿ

ಇಂದು ಚಾಮರಾಜನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತಕ್ಕೆ ಭೇಟಿ ನೀಡಿ ಒಕ್ಕೂಟದ ಬ್ಯಾಂಕ್ ಖಾತೆಗಳಿಗಾಗಿ ಎಂಸಿಡಿಸಿಸಿ ಬ್ಯಾಂಕ್ ನೊಂದಿಗೆ ಪಾಲುದಾರಿಕೆ ಮಾಡಿಕೊಳ್ಳುವ ಕುರಿತು ಎಂಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾದ ಶ್ರೀ ಜಿ.ಡಿ.ಹರೀಶ್ ಗೌಡ ಅವರು ಒಕ್ಕೂಟದ ಅಧ್ಯಕ್ಷರೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಎಂಸಿಡಿಸಿಸಿ ಬ್ಯಾಂಕ್ ನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಜಿ.ಸಿ.ಜನಾರ್ಧನ್, ಪ್ರಧಾನ ವ್ಯವಸ್ಥಾಪಕರಾದ ಶ್ರೀ ಶಶಿಧರ್, ಚಾಮರಾಜನಗರ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಅಧ್ಯಕ್ಷರಾದ ಶ್ರೀ ಹೆಚ್.ಎಸ್.ನಂಜುಂಡ ಪ್ರಸಾದ್, ಸತೀಶ್, ರವಿ ಹಾಗೂ ಒಕ್ಕೂಟದ ನಿರ್ದೇಶಕರು ಉಪಸ್ಥಿತರಿದ್ದರು.